ಬಸವ ಸಂಸ್ಕೃತಿ ಅಭಿಯಾನ ಸೆಪ್ಟೆಂಬರ್ 6ರಂದು ಬಳ್ಳಾರಿಗೆ ರಥಯಾತ್ರೆ

0
4
ಬಸವಸಂಸ್ಕೃತಿ ರಥಯಾತ್ರೆ
Advertisement

ಬಳ್ಳಾರಿ: ಶರಣ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ರಾಜ್ಯಾದ್ಯಂತ ಬಸವ ಸಂಸ್ಕೃತಿ ಅಭಿಯಾನವನ್ನು ಆರಂಭಿಸಲಾಗಿದೆ. ಬಸವಣ್ಣನವರ ಜನ್ಮಸ್ಥಳವಾದ ಬಸವನಬಾಗೇವಾಡಿಯಿಂದ ಸೆಪ್ಟೆಂಬರ್ 1ರಂದು ಈ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಇದು ಸಂಪೂರ್ಣ 30 ದಿನಗಳ ಕಾಲ ನಡೆಯಲಿದೆ.

ಈ ಅಭಿಯಾನದ ಅಂಗವಾಗಿ ರಥೋತ್ಸವ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಬಸವಣ್ಣನವರ ವಚನಗಳು ಮತ್ತು ಶರಣ ಸಂಸ್ಕೃತಿಯನ್ನು ಮನೆ ಮನೆಗೆ ತಲುಪಿಸುವುದೇ ಈ ಕಾರ್ಯಕ್ರದ ಮುಖ್ಯ ಉದ್ದೇಶವಾಗಿದೆ.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಿ.ಎಸ್. ಪನ್ನರಾಜ್ ಅವರು, “ಸೆಪ್ಟೆಂಬರ್ 6ರಂದು ರಥಯಾತ್ರೆ ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದು, ಬೃಹತ್ ಮೆರವಣಿಗೆಯ ಮೂಲಕ ಬಸವ ಸಂಸ್ಕೃತಿಯ ಸಾರವನ್ನು ಜನರಿಗೆ ತಲುಪಿಸಲಾಗುವುದು” ಎಂದು ತಿಳಿಸಿದ್ದಾರೆ.

Advertisement

LEAVE A REPLY

Please enter your comment!
Please enter your name here