NPS TO OPS: ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಗುಡ್‌ ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ

0
116
Advertisement

ಬೆಂಗಳೂರು ಫೆ 20 :

BP News Karnataka

ಹೊಸ ಪಿಂಚಣಿ ಯೋಜನೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಪ್ರಣಾಳಿಕೆಯನುಸಾರ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಅಧ್ಯಯನ ಸಮಿತಿ ವರದಿ ಬಳಿಕ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. 2006 ರ ಏಪ್ರಿಲ್ 1ರ ನಂತರ ನೇಮಕವಾಗಿರುವವರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬ ಸರ್ಕಾರಿ ನೌಕರರ ಬೇಡಿಕೆಯ ಸಾಧಕ-ಬಾಧಕಗಳ ಅಧ್ಯಯನಕ್ಕೆ ಸಮಿತಿಯನ್ನು ರಚಿಸಲಾಗಿದೆ. ಅದು ಕೊನೆಯ ಹಂತದ ಸಭೆ ನಡೆಸಿದೆ. ಅದೇ ರೀತಿ 2015 ರಲ್ಲಿ ನಗದು ರಹಿತ ಜ್ಯೋತಿ ಸಂಜೀವಿನಿ ಯೋಜನೆಯನ್ನು 7 ಗಂಭೀರ ಕಾಯಿಲೆಗಳಿಗೆ ಅನುಷ್ಠಾನಕ್ಕೆ ತರಲಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದು, ಶೀಘ್ರವಾಗಿ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ತಿಳಿಸಿದರು.

Advertisement

LEAVE A REPLY

Please enter your comment!
Please enter your name here