Advertisement 

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಶಾಸಕ, ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.ಸೋಮವಾರ ‘ಸಲಾಂ ಬಳ್ಳಾರಿ ಅಭಿಯಾನ’ದ ಅಂಗವಾಗಿ ವಾರ್ಡ್ ಸಂಖ್ಯೆ 10ರ ವಿವಿಧ ಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.ನಾಗೇಂದ್ರಣ್ಣರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲೆಯ ಎಲ್ಲಾ ಶಾಸಕರು ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಎಂದರು.
Advertisement 





